ಚಿಕ್ಕಬಳ್ಳಾಪುರ: ಸೂಕ್ತ ಸಮಯಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಲಭ್ಯವಾಗದ ಕಾರಣ 9 ವರ್ಷದ ಬಾಲಕಿ ಮೃತಪಟ್ಟಿದ್ದು ಇದರಿಂದ ಆಕ್ರೋಶಗೊಂಡ ಕುಟುಂಬ ಸದಸ್ಯರು ಮತ್ತು ಸಾರ್ವಜನಿಕರು ತಾಲ್ಲೂಕಿನ ಪೆರೇಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಸೋಮವಾರ ಪ್ರತಿಭಟಿಸಿದರು.